ಕಾಣೆಯಾಗಿದ್ದ ಪ್ರತಿಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ
ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯಲ್ಲಿ ಈ ಘಟನೆ ನಡೆದಿದೆ.
ಬಾಳೂರು ಹೊರಟ್ಟಿ ಗ್ರಾಮದ ಬಿ ಎಂ ರಮೇಶ್ ಎಂಬವರು ಜುಲೈ 25ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಈ ಬಗ್ಗೆ ಬಾಳೂರು ಠಾಣೆಯಲ್ಲಿ ದೂರು ನೀಡಲಾಗಿತ್ತು.
ಆದರೆ ಅವರು ಇಂದು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಳೂರು ಗ್ರಾಮದ ಕಾಫಿ ಬೆಳೆಗಾರ ನಾಗರಾಜು ಎಂಬುವರ ಕೆರೆಯಲ್ಲಿ ರಮೇಶ್ ಅವರ ಶವ ಪತ್ತೆಯಾಗಿದೆ.
ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಕೆರೆದಡದಲ್ಲಿ ಕೆಲವು ಕುರುಹುಗಳು ಸಿಕ್ಕಿದ್ದವು. ಇದರಿಂದ ಕೆರೆಯಲ್ಲಿ ಸ್ಥಳೀಯ ಮುಳುಗುದಾರರ ತಂಡ ಶೋಧನೆ ನಡೆಸಿ ಶವವನ್ನು ಪತ್ತೆ ಹಚ್ಚಿದ್ದಾರೆ.
ರಮೇಶ್ ವಿವಾಹಿತರಾಗಿದ್ದು, ಒಬ್ಬ ಮಗನಿದ್ದಾನೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ರಮೇಶ್ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.