ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹಾಗೂ ಜನ್ನಾಪುರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಜನ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಹಲವು ಕಾರ್ಯಕರ್ತರು ಭಾನುವಾರ ಸ್ವಚ್ಛತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡರು.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಗೋಣಿಬೀಡು ಹೋಬಳಿ ಸಂಯೋಜಕ ಕಾರ್ತಿಕ್ ಕನ್ನೆಹಳ್ಳಿ ಹಾಗೂ ಸಹ ಸಂಯೋಜಕರಾದ ರಾಜು ಜನ್ನಾಪುರ ಕಾರ್ಯಕರ್ತರಾದ ರಮೇಶ್ ಕನ್ನಹಳ್ಳಿ, ಅಮೋಘ ಉಗ್ಗೆಹಳ್ಳಿ, ಸುಮಂತ್, ಶ್ರೀಶಾಂತ ಜನ್ನಾಪುರ. ಲಿಖಿತ್, ವಿಶ್ವ ಮುಂತಾದವರು ಭಾಗವಹಿಸಿದ್ದರು.
ಹಿಂದೂ ಪರಿಷತ್ ಮತ್ತು ಬಜರಂಗದಳ ಸೇವಾ ಕಾರ್ಯಕ್ಕೆ ಶಾಲೆಯ ಶಿಕ್ಷಕ ವೃಂದ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರು ಪದಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.