ಕಾಫಿತೋಟವೊಂದರಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕೊಡಗು ಜಿಲ್ಲೆ ಗೋಣಿಕೊಪ್ಪಲು ಸಮೀಪದ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.
ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಗ್ರಾಮದ ತೋಟವೊಂದರಲ್ಲಿ ಕಾಡಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯಸ್ಸಿನ ಗಂಡು ಕಾಡಾನೆ ಎಂದು ಅಂದಾಜಿಸಲಾಗಿದೆ. ಮೇಲ್ನೋಟಕ್ಕೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಭಾನುವಾರು ಕಾಡಾನೆ ಕಳೆಬರ ಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಕೊಡಗು ಡಿಸಿಎಫ್ ಜಗನ್ನಾಥ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.