ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಖ್ಯಾತ ಸಿನಿಮಾ ಕೊರಿಯೋಗ್ರಾಫರ್ ಬರ್ಬರ ಹತ್ಯೆಯಾಗಿದ್ದು ಸಿಲಿಕಾನ್ ಸಿಟಿ ಬೆಚ್ಚಿ ಬೀಳುವಂತೆ ಮಾಡಿದೆ. ಭದ್ರಾವತಿ ಮೂಲದ ನವ್ಯಾ(25 ವರ್ಷ) ಕೊಲೆಯಾದ ಮಹಿಳೆ.
ಸಿನಿಮಾ ಕೊರಿಯೋಗ್ರಾಫರ್ ಆಗಿದ್ದ ನವ್ಯಾ ಅವರು 3 ವರ್ಷದ ಹಿಂದೆ ಚಿಕ್ಕಬಳ್ಳಾಪುರ ಮೂಲದ ಕಿರಣ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಕಿರಣ್ ಕ್ಯಾಬ್ ಚಾಲಕನಾಗಿದ್ದ. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು.
ನವ್ಯಾ ಹಾಗೂ ಕಿರಣ್ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ವಾಸವಿದ್ದರು. ಪತಿ ಕಿರಣ್ ಪತ್ನಿಯ ಮೇಲೆ ಅನುಮಾನಗೊಂಡು ಗಲಾಟೆ ಮಾಡುತ್ತಿದ್ದ. ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ ಎನ್ನಲಾಗಿದೆ. ಹೆಂಡತಿಯನ್ನು ಕೊಲೆ ಮಾಡಿದ ಕಿರಣ್ ಘಟನಾ ಸ್ಥಳದಿಂದ ಎಸ್ಕೇಪ್ ಆಗಿದ್ದ. ಕೆಂಗೇರಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.