October 5, 2024

ದೇಶದಲ್ಲಿ 78ನೇ ಸ್ವಾತಂತ್ರ್ಯ ಆಚರಣೆಯಾದರೂ ಜನರು ಉಸಿರುಗಟ್ಟುವ ವಾತಾವರಣ ತಪ್ಪಿಲ್ಲ. ಈ ದೇಶವನ್ನಾಳಿದ ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರ ಜನರಿಗೆ ನ್ಯಾಯ, ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಎಸ್‍ಡಿಪಿಐ ಅಧ್ಯಕ್ಷ ಅಂಗಡಿ ಚಂದ್ರು ಹೇಳಿದರು.

ಅವರು ಶುಕ್ರವಾರ ಮೂಡಿಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರಕಾರ ಜನರನ್ನು ಭಯದ ವಾತಾವರಣಕ್ಕೆ ತಳ್ಳಿದರೆ, ರಾಜ್ಯ ಸರಕಾರ ದಲಿತರ ಹಣದಲ್ಲಿ ರಾಜ್ಯಭಾರ ಮಾಡುತ್ತಿದೆ. ದಲಿತರಿಗೆ ಮೀಸಲಿಟ್ಟ ಕೋಟ್ಯಾಂತರ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗಿದೆ. ದಲಿತರು, ಹಿಂದುಳಿದವರು ಮತ್ತು ಅಲ್ಪ ಸಂಖ್ಯಾತರನ್ನು ಆರ್ಥಿಕವಾಗಿ ಮುಂದೆ ತರಬೇಕಾದ ಸರಕಾರ ಅಹಿಂದಾ ಹೆಸರಿಲ್ಲಿ ಶೋಷಣೆ ಮಾಡುತ್ತಿರುವುದನ್ನು ಎಡಿಪಿಐ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ದಲಿತರಿರುವ ಕ್ಷೇತ್ರಗಳಿಗೆ ಎಸ್‍ಇಪಿ, ಟಿಎಸ್‍ಪಿ ಹಣ ಇದೂವರೆಗೂ ಬಿಡುಗಡೆ ಮಾಡಿಲ್ಲ. ಇನ್ನು ದಲಿತರ ಅಭಿವೃದ್ಧಿ ಹೇಗೆ ಸಾಧ್ಯವೆಂದು ಪ್ರಶ್ನಿಸಿದ ಅವರು, ದಲಿತರಿಗೆ ಮೀಸಲಿಟ್ಟ ಹಣ ಬೇರೆ ಯೋಜನೆಗಳಿಗೆ ಬಳಕೆ ಮಾಡದಂತೆ ಕಾಯಿದೆ ತಿದ್ದುಪಡಿ ಮಾಡಬೇಕೆಂದು ಒತ್ತಾಯಿಸಿದ ಅವರು, ಜನರು ಕಾಂಗ್ರೆಸ್ ಮತ್ತು ಬಿಜೆಪಿ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸದೇ ಮೈತ್ರಿ ಮಾಡಿಕೊಂಡು ಸರಕಾರ ನಡೆಸುತ್ತಿದೆ. ಮುಂದಿನ ದಿನದಲ್ಲಿ ಈ ಎರಡೂ ಪಕ್ಷ ದೂಳಿಪಟವಾಗಲಿದ್ದು, ಸಮಾನತೆಯ ಪ್ರತೀಕವಾಗಿರುವ ಎಸ್‍ಡಿಪಿಐ ಪಕ್ಷದ ಮೇಲೆ ಜನರು ಒಲವು ತೋರುತ್ತಿದ್ದಾರೆಂದು ಹೇಳಿದರು.

ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಸರ್ಜನ್ ಇಲ್ಲ. ರಕ್ತ ಪರೀಕ್ಷೆ, ಓಷಧ, ಸ್ಕ್ಯಾನಿಂಗ್ ಮುಂತಾದ ಸಣ್ಣಪುಟ್ಟ ಪರೀಕ್ಷೆಗೂ ಹೊರಗಡೆ ಚೀಟಿ ಬರೆದು ಕೊಡುತ್ತಿದ್ದಾರೆ. ಆಲ್ದೂರು ಹೋಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲ. ಕಾರ್ಮಿಕರಿಗೆ ಅಪಘಾತ ಸಂಭವಿಸಿದಾಗ ಕನಿಷ್ಠ ಪ್ರಾಥಮಿಕ ಚಿಕಿತ್ಸೆ ತೊರೆಯದಂತಾಗಿದೆ. ಆಲ್ದೂರು ಪ್ರಾಥಮಿಕ ಕೇಂದ್ರವನ್ನು ಸಮುದಾಯ ಅರೋಗ್ಯ ಕೇಂದ್ರವಾಗಿ ಮಾಡಬೇಕು. ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಇದೂವರೆಗೂ ಗೆದ್ದು ಬಂದಂತ ಶಾಸಕರಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.

ಈಗಿನ ಶಾಸಕಿ ನಯನ ಮೋಟಮ್ಮ ಅವರು ಪಟ್ಟಣದ ಹೊರಗಡೆ ಇರುವ ತಮ್ಮ ಮನೆಯಲ್ಲಿ ಕಚೇರಿ ಮಾಡಿಕೊಂಡಿದ್ದರಿಂದ ಜನರಿಗೆ ತೆರಳಲು ಕಷ್ಟವಾಗುತ್ತಿದೆ. ಶಾಸಕರ ಕಚೇರಿ ಪಟ್ಟಣದಲ್ಲಿಯೇ ಮಾಡಬೇಕು. ಮೂಡಿಗೆರೆ ಪಟ್ಟಣದಲ್ಲಿ ಗುಂಡಿ ಬಿದ್ದ ರಸ್ತೆ ಸರಿಪಡಿಸಬೇಕು. ಚನ್ನಾಗಿರುವ ರಸ್ತೆಯನ್ನು ಹೊಡೆದು ಪುನರ್ ನಿರ್ಮಾಣ ಮಾಡಿ ಹಣ ಪೋಲು ಮಾಡುವುದನ್ನು ನಿಲ್ಲಿಸಬೇಕು. ಹಳ್ಳಿಗಳಲ್ಲಿರುವ ರಸ್ತೆಗಳ ಪರಿಸ್ಥಿತಿಯಂತೂ ಹೇಳತೀರದಾಗಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಮುಂದಿನ ದಿನದಲ್ಲಿ ಪಕ್ಷದಿಂದ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಕಾರ್ಯದರ್ಶಿ ರಿಜ್ವಾನ್ ಮಾತನಾಡಿ, ಸುಮಾರು 15 ವರ್ಷದಿಂದ ನಮ್ಮ ಪಕ್ಷ ಜನಪರ ಹೋರಾಟಗಳನ್ನು ಮಾಡುತ್ತ ಬಂದಿದ್ದು, 16 ನೇ ವರ್ಷಕ್ಕೆ ಕಾಲಿಟ್ಟಿದೆ. ಇತ್ತೀಚೆಗೆ ಪಕ್ಷದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, 2ನೇ ಬಾರಿಗೆ ಅಂಗಡಿ ಚಂದ್ರು ನೂತನ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿದ್ದಾರೆಂದು ಹೇಳಿದರು.

ಉಪಾಧ್ಯಕ್ಷ ಎಂ.ಯು.ಶರೀಫ್, ಸಹ ಕಾರ್ಯದರ್ಶಿ ಸಂತೋಷ್, ಕೋಶಾಧಿಕಾರಿ ಕಾಲಿದ್, ನಾಗೇಶ್ ಸಾಲುಮರ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ