October 5, 2024

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲೆಯ  2024-27 ಅವಧಿಗೆ  ನೂತನವಾಗಿ ಆಯ್ಕೆಯಾಗಿರುವ ಬ್ರಾಂಚ್ ಪದಾಧಿಕಾರಿಗಳು ಮತ್ತು ಬ್ಲಾಕ್ ಸಮಿತಿಗಳ ಸದಸ್ಯರುಗಳ ನಾಯಕರುಗಳ ಸಭೆ ಜಿಲ್ಲಾ ಕಛೇರಿಯಲ್ಲಿ ಇತ್ತೀಚೆಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಸ್ಕರ್ ಪ್ರಸಾದ್ ಪ್ರಸ್ತುತ ಸನ್ನಿವೇಶದಲ್ಲಿ ಪರ್ಯಾಯ ರಾಜಕಾರಣದ ಅಗತ್ಯತೆ ಮತ್ತು ಅಪ್ಸರ್ ಕೊಡ್ಲಿಪೇಟೆ   ಪರಿಣಾಮಕಾರಿ ನಾಯಕತ್ವದ ಬಗ್ಗೆ ತರಗತಿಗಳನ್ನು ನೀಡಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ನೂತನವಾಗಿ ಆಯ್ಕೆಯಾಗಿರುವ ನಾಯಕರುಗಳು ಸ್ಥಳೀಯ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಹೋರಾಟ ಮಾಡುವ ಮೂಲಕ ಅವರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು ಎಂದು ಕಿವಿಮಾತು ಹೇಳಿದರು. ಜನರ ಮೂಲಭೂತ ಸಮಸ್ಯೆಗಳ ಬಗ್ಗೆ ರಾಜಕೀಯ ಪಕ್ಷಗಳು ಒತ್ತು ನೀಡಿದಾಗ ಜನರ ಪ್ರೀತಿವಿಶ್ವಾಸ ಗಳಿಸಲು ಸಾಧ್ಯ. ಸ್ಥಳೀಯವಾಗಿ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಮುನ್ನಲೆಗೆ ತಂದು ಸರ್ಕಾರದ ಗಮನಸೆಳೆಯುವ ಕೆಲಸ ಮಾಡಬೇಕು ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಒಟ್ಟು 27000 ಎಕರೆಗೂ ಹೆಚ್ಚು ಅರಣ್ಯ, ಸ್ಮಶಾನ, ಗೋಮಾಳ, ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದು, ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಅರಣ್ಯ ಸಚಿವರು ಈ ಹಿಂದೆ ಖಡಕ್ ಸೂಚನೆ ನೀಡಿದ್ದರು ಹಾಗೂ ಸುಪ್ರೀಂ ಕೋರ್ಟ್ ನ ಹಸಿರು ಪೀಠವು ಮೀಸಲು ಅರಣ್ಯ ಒತ್ತುವರಿ ತೆರವುಗೊಳಿಸಬೇಕು ಇಲ್ಲದೆ ಹೋದರೆ ಸಂಬಂಧಿಸಿದ ಅರಣ್ಯಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸುತ್ತಲೇ ಬಂದಿದೆ, ಹಾಗೂ ನ್ಯಾಯಲಯಗಳಲ್ಲಿ ಅರಣ್ಯ ಇಲಾಖೆಯ ಪರವಾಗಿಯೆ ತೀರ್ಪುಗಳು ಬಂದಿದೆ.   ಅರಣ್ಯ ಇಲಾಖೆ ಅಧಿಕಾರಿಗಳು ಜೀವನೋಪಾಯಕ್ಕಾಗಿ ಅಲ್ಪಸ್ವಲ್ಪ ಒತ್ತುವರಿ ಮಾಡಿರುವವರನ್ನು ಬಿಡಿಸುವ ಮುನ್ನ ನೂರಾರು ಎಕರೆಗು ಹೆಚ್ಚು ಅರಣ್ಯ ಒತ್ತುವರಿ ಮಾಡಿರುವ ಪ್ರಭಾವಿಗಳನ್ನು ಬಿಡಿಸುವ ಕೆಲಸ ಮಾಡಬೇಕು ಎಂದು   ಆಗ್ರಹಿಸಿದರು.

ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ  ಗೌಸ್ ಮುನೀರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಜಮೀಲ್ ಅಹ್ಮದ, ಮುಬಾರಕ್ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಂಗಡಿ ಚಂದ್ರು, ಕಡೂರು ಮತ್ತು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ  ಮೊಹಮ್ಮದ್ ಜೀಲಾನ್, ಕಡೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ  ಆಫ್ರೀದ್  ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ