October 5, 2024

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ – 2024 ವಿರೋಧಿಸಿ ನಗರದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧ್ಯಕ್ಷರಾದ ಗೌಸ್ ಮುನೀರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಒಕ್ಕೂಟ ಬಿಜೆಪಿ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರಲು ಹೊರಟಿದ್ದು ಇದು ಸಂವಿಧಾನ ವಿರೋಧಿಯಾಗಿದೆ, ಈ ಹಿಂದೆ ಮುಸಲ್ಮಾನರು ಸಮುದಾಯದ ಧಾರ್ಮಿಕ ಚಟುವಟಿಕೆಗಳಿಗೆ ಬಳುಸುವ ಸಲುವಾಗಿ ತಮ್ಮ ಆಸ್ತಿಗಳನ್ನು ವಕ್ಫ್ ಬೋರ್ಡ್ ಗೆ ಹಸ್ತಾಂತರಿಸಿ ದಾನ ಮಾಡಿರುವುದಾಗಿದ್ದು, ಇದು ಮುಸ್ಲಿಮರ ಖಾಸಗಿ ಸ್ವತ್ತಾಗಿದೆ, ಇದೀಗ ಕೇಂದ್ರ ಸರ್ಕಾರವು ದುರುದ್ದೇಶದಿಂದ ವಕ್ಫ್ ಆಸ್ತಿಗಳನ್ನು ಕಬಳಿಸುವ ಸಲುವಾಗಿ ವಕ್ಫ್ ಬೋರ್ಡ್ ನ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದ್ದು ಇದು ಜಾತ್ಯತೀತ ಮೌಲ್ಯಗಳ ವಿರುದ್ಧವಾಗಿದೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಈ ಮಸೂದೆಯ ವಿರುದ್ಧ ತನ್ನ ವಿರೋಧ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

SDPI ಮೂಡಿಗೆರೆ ವಿಧಾನಸಭಾ ಅಧ್ಯಕ್ಷರಾದ ಅಂಗಡಿ ಚಂದ್ರು, SDPI ಜಿಲ್ಲಾ ಮುಖಂಡರಾದ ಅಝ್ಮತ್ ಪಾಷ, ಅತೀಖ್ , AIMDF ನ ರಾಜ್ಯಾಧ್ಯಕ್ಷರಾದ ನಾಸೀರ್ ಅಹಮದ್, ಧರ್ಮ ಗುರುಗಳಾದ ಮೌಲಾನ ಯೂನುಸ್ ರವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ SDPI ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಕೆ.ಪಿ ಖಾಲಿದ್, ಜಿಲ್ಲಾ ಸಮಿತಿ ಸದಸ್ಯರಾದ ಮುಸ್ತಫಾ ಆಲ್ದೂರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಆರೀಫ್, ಅಜ್ನಾನ್ ಆಲ್ದೂರು ಗ್ರಾಮ ಸಮಿತಿ ಅಧ್ಯಕ್ಷರಾದ ಮನ್ಸೂರ್, ಮುಸ್ಲಿಂ ಧರ್ಮ ಗುರುಗಳು, ಹಾಗೂ SDPI ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ