ಮೂಡಿಗೆರೆ ತಾಲ್ಲೂಕಿನ ಬಣಕಲ್ ನಜರತ್ ಶಾಲೆಯ ಸ್ಕೌಟ್ ಅಂಡ್ ಗೈಡ್ಸ್ ವಿಭಾಗದಿಂದ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಸ್ಕೌಟ್ ಮತ್ತು ಗೈಡ್ಸ್ ವಿಭಾಗ ಮಾರ್ಗದರ್ಶಕರಾದ ಪ್ರವೀಣ್ ಮತ್ತು ಡಯಾನಾ ಡಿಸೋಜರವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ದೇವರಮನೆ ಪರಿಸರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು.
ಇವರ ಈ ಕಾರ್ಯಕ್ಕೆ ದೇವರಮನೆ ದೇವಸ್ಥಾನ ಆಡಳಿತ ಮಂಡಳಿ ಮತ್ತು ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.