October 5, 2024

ಭತ್ತದ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಕಾರ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕಾರ್ಲಗದ್ದೆ ಗ್ರಾಮದ ಕೃಷಿಕ ಸತೀಶ್ ಶೆಟ್ಟಿ (46 ವರ್ಷ) ಎನ್ನುವರು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ದುರ್ದೈವಿ.  ಇಂದು ಗುರುವಾರ ಮುಂಜಾನೆ ಎಂದಿನಂತೆ ಗದ್ದೆಗೆ ತೆರಳಿದ್ದ ವೇಳೆ ವಿದ್ಯುತ್ ಪ್ರವಹಿಸಿ ಸತೀಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೃತರ ಸಹೋದರ ಕೆ.ಎಸ್. ದಿನೇಶ್ ಆಲ್ದೂರು ಠಾಣೆಗೆ ದೂರು ನೀಡಿದ್ದು, ತನ್ನ ಸಹೋದರ ಸತೀಶ್ ಗುರುವಾರ ಬೆಳಿಗ್ಗೆ 7 ಗಂಟೆಯ ಸಮಯದಲ್ಲಿ ತನ್ನ ಭತ್ತದ ಗದ್ದೆಗೆ ತೆರಳಿದ್ದು, ಆಕಸ್ಮಿಕವಾಗಿ ವಿದ್ಯುತ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಳಿಗ್ಗೆ ಮನೆಬಿಟ್ಟು ಹೋಗಿದ್ದ ಮಗ ತಿಂಡಿಗೂ ಬಂದಿಲ್ಲವೆಂದು ತಂದೆ ಸಣ್ಣಪ್ಪಶೆಟ್ಟಿ ಯವರು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಮಗನನ್ನು ಹುಡುಕಿಕೊಂಡು ಹೋದಾಗ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.

ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃದೇಹದ ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಗೆ ರವಾನಿಸಲಾಗಿದೆ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಮೃತ ಸತೀಶ್ ಶೆಟ್ಟಿ ವಿವಾಹಿತರಾಗಿದ್ದು, ಪತ್ನಿ, ಮಗ ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ