October 5, 2024

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಮೂಡಿಗೆರೆ ನಗರ ಘಟಕದ ವತಿಯಿಂದ 170ನೇ ನಾರಾಯಣಗುರು ಜಯಂತಿ ಮತ್ತು ಓಣಂ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮೂಡಿಗೆರೆ ಲ್ಯಾಂಪ್ಸ್ ಸೊಸೈಟಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಗನ್ ಮೋಹನ್ ಅವರು ವಹಿಸಿ ಮಾತನಾಡಿ ; ಮೂಡಿಗೆರೆ ತಾಲ್ಲೂಕಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ನಮ್ಮ ಸಮುದಾಯವನ್ನು ಒಂದೇ ವೇದಿಕೆಯಲ್ಲಿ ತರುವ ಪ್ರಯತ್ನ ನಡೆಸುತ್ತಿದ್ದು, ನಮ್ಮ ಹಿರಿಯರು ರೂಢಿಸಿಕೊಂಡು ಬಂದ ಸಂಪ್ರದಾಯವನ್ನು ಈಗಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಮೂಡಿಗೆರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ವಿ.ಶ್ರೀನಾಥ್ ರೆಡ್ಡಿಯವರು ಭಾಗವಹಿಸಿ ಮಾತನಾಡಿದರು.

ಸಮಿತಿಯ ಮಹಿಳಾ ಸದಸ್ಯರು ರಂಗೋಲಿ ಬಿಡಿಸಿ ಓಣಂ ನೃತ್ಯವನ್ನು ಮಾಡಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಗೌರವ ಅಧ್ಯಕ್ಷರಾದ ಎನ್. ಮೋಹನ್, ಮೂಡಿಗೆರೆ ನಗರ ಘಟಕದ ಗೌರವ ಅಧ್ಯಕ್ಷ ಸುಬ್ರಮಣ್ಯ, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ವಿ. ಮಹೇಶ್, ನಗರ ಘಟಕದ ಕಾರ್ಯದರ್ಶಿ ಓಮನ, ಉಪಾಧ್ಯಕ್ಷ ಕುಮಾರ್, ಖಜಾಂಚಿ ವೇಲಾಯುದ, ಸಹಕಾರ್ಯದರ್ಶಿ ನಳಿನಿ,  ನಗರ ಘಟಕ, ತಾಲ್ಲೂಕು ಘಟಕದ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ