“ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಅಭಿಯಾನದ ಅಂಗವಾಗಿ ಮೂಡಿಗೆರೆಗೆ ಆಗಮಿಸಿದ್ದ ಕನ್ನಡ ಜ್ಯೋತಿ ರಥ ಯಾತ್ರೆಗೆ ಗುರುವಾರ ಬೆಳಗ್ಗೆ 10ಗಂಟೆಗೆ ಶಾಸಕಿ ನಯನಾ ಮೋಟಮ್ಮ ಅವರು, ಕನ್ನಡ ತಾಯಿ ಭುವನೇಶ್ವರಿ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ಬಳಿಕ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿ ತಾಲೂಕಿನ ಗೋಣಿಬೀಡು, ಕೊಟ್ಟಿಗೆಹಾರದ ಮೂಲಕ ಬೆಳ್ತಂಗಡಿ ತಾಲೂಕಿಗೆ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ಗೀತಾ ರಂಜನ್ ಅಜಿತ್ ಕುಮಾರ್, ಉಪಾಧ್ಯಕ್ಷ ಎಚ್.ಪಿ.ರಮೇಶ್, ಸದಸ್ಯರಾದ ಕೆ.ವೆಂಕಟೇಶ್, ಹಂಝಾ, ಹಳೆಮೂಡಿಗೆರೆ ಸದಸ್ಯರಾದ ಜುಬೇರ್, ಜ್ಯೋತಿ ಸಾಲ್ಡಾನ, ಜಾನಕಿ, ಕಸಾಪ ಹೋಬಳಿ ಅಧ್ಯಕ್ಷ ರವಿ ಕುನ್ನಳ್ಳಿ, ಕಸಾಪದ ಮಾಜಿ ತಾಲೂಕು ಅಧ್ಯಕ್ಷ ಶಾಂತಕುಮಾರ್, ತಹಸೀಲ್ದಾರ್ ರಾಜಶೇಖರ್ ಮೂರ್ತಿ, ತಾ.ಪಂ. ಇಒ ದಯಾವತಿ, ಬಿಇಒ ಹೇಮಂತಚಂದ್ರ, ಪಿಎಸ್ಐ ಶ್ರೀನಾಥ್ರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಸೋಮಶೇಖರ್, ಮೀನುಗಾರಿಕೆ ಇಲಾಖೆ ಅಧಿಕಾರಿ ಎ.ಎಂ.ಮಹೇಶ್, ಕೃಷಿ ಇಲಾಖೆ ಅಧಿಕಾರಿ ಸುಮಾ, ನವೀನ್, ಬಕ್ಕಿ ಮಂಜು, ಬಕ್ಕಿ ರವಿ, ಹಸೇನರ್, ಎಂ.ಎಸ್.ನಾಗರಾಜ್, ಪಿಡಿಒ ಸಂಘದ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಗೌರವಾಧ್ಯಕ್ಷ ಎಚ್.ಎನ್.ಮಹೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆ ಮುಖಂಡರು ಉಪಸ್ಥಿತರಿದ್ದರು.