October 5, 2024

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸೀತಾರಾಮ ದೇವಸ್ಥಾನದಲ್ಲಿ ಅಕ್ಟೋಬರ್ 3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದೆ. ಅದಕ್ಕೆ ಸಿದ್ದತೆಯೂ ನಡೆಯುತ್ತಿದೆ. ದೇವಸ್ಥಾನ  ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ.

ಅ 3ರಂದು ಗುರುವಾರ ಸಂಜೆ 6 ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 4ರಂದು  ಶುಕ್ರವಾರ ಸಂಜೆ  ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5 ರಂದು ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6ರಂದು ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7ರಂದು ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ,8ರಂದು ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ,9ರಂದು ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ, 10 ರಂದು ಗುರುವಾರ ಸಮಿತಿಯವರಿಂದ ಭಜನೆ, 11ರಂದು ಶುಕ್ರವಾರ ಭಜನೆ,ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರಂದು ಶನಿವಾರ ಸಂಜೆ 6ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿ  ಇವರಿಂದ ಭಜನಾ ಕುಣಿತ,ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ,ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ