October 5, 2024

ಹಿರಿಯ ರಾಜಕಾರಣಿ, ಮಾಜಿ ಸಚಿವ, ಮಾಜಿ ಸಂಸದ ಡಿ.ಬಿ. ಚಂದ್ರೇಗೌಡರ ನಿಧನಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟ ಮತ್ತು ಮೂಡಿಗೆರೆ ಬೆಳೆಗಾರರ ಸಂಘದ ಪದಾಧಿಕಾರಿಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೆ.ಜಿ.ಎಫ್. ಅಧ್ಯಕ್ಷ ಹೆಚ್.ಟಿ. ಮೋಹನ್ ಕುಮಾರ್, ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ, ಮೂಡಿಗೆರೆ ಪಿ.ಸಿ.ಎ.ಆರ್.ಡಿ. ಬ್ಯಾಂಕ್ ಅಧ್ಯಕ್ಷ ಹಳಸೆ ಶಿವಣ್ಣ, ಮೂಡಿಗೆರೆ ಕಾಫಿ ಕೋರ್ಟ್ ಅಧ್ಯಕ್ಷ ಡಿ.ಬಿ. ಜಯಪ್ರಕಾಶ್, ಮೂಡಿಗೆರೆ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ, ಕಾರ್ಯದರ್ಶಿ ಮನೋಹರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ತಮ್ಮ ಸಂತಾಪ ಸಂದೇಶದಲ್ಲಿ ಡಿ.ಬಿ.ಚಂದ್ರೇಗೌಡರ ಸೇವೆಯನ್ನು ಸ್ಮರಿಸಿದ್ದಾರೆ.

ಕಾಫಿ ಬೆಳೆಗಾರರ ಕುಟುಂಬದಲ್ಲಿ ಜನಿಸಿದ ಡಿ.ಬಿ.ಚಂದ್ರೇಗೌಢರು ತಮ್ಮ ಪರಿಶುದ್ಧವಾದ ರಾಜಕೀಯ ನಡೆಯಿಂದ ಬೆಳೆಗಾರರ ಸಮೂಹಕ್ಕೆ ಹೆಮ್ಮೆ ತಂದಿದ್ದಾರೆ. ಕಾಫಿ ಬೆಳೆಗಾರರೇ ಸಮಸ್ಯೆಗಳಿಗೆ ಅವರು ಸದಾ ಸ್ಪಂದಿಸಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಸರ್ಕಾರದ ಭಾಗವಾಗಿದ್ದಾಗ ಸದಾ ಕಾಫಿ ಉದ್ದಿಮೆಗೆ ಪೂರಕವಾದ ನಿಲುವುಗಳನ್ನು ಹೊಂದಿ ಬೆಂಬಲಿಸಿದ್ದಾರೆ. ನಾಡಿನ ಹಿರಿಯ ರಾಜಕಾರಣಿಯಾಗಿ ಎಲ್ಲರಿಗೂ ಮಾದರಿಯಾಗಿ ಸಾರ್ವಜನಿಕ ಸೇವೆ ಮಾಡಿದ್ದಾರೆ. ಅವರ ಅಗಲಿಕೆಯಿಂದ ಚಿಕ್ಕಮಗಳೂರು ಜಿಲ್ಲೆ ಮತ್ತು ಮೂಡಿಗೆರೆ ತಾಲ್ಲೂಕು ಹಿರಿಯ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ