ಕರ್ತವ್ಯ ದಲಿದ್ದ. ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಮೂಡಿಗೆರೆಯಿಂದ ಗುತ್ತಿಹಳ್ಳಿ , ಹೆಸಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಚಾಲಕ ರವಿ ಲಮಾಣಿ(46 ವರ್ಷ) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಚಾಲನೆ ಮಾಡುತ್ತಿದ್ದ ವೇಳೆಯೇ ಎದೆ ನೋವು ಕಾಣಿಸಿಕೊಂಡಿದ್ದು, ಆ ಸಂದರ್ಭದಲ್ಲಿ ಬಸ್ಸು ಹೆಸಗೋಡು ಗ್ರಾಮದಲ್ಲಿ ನಿಂತಿದ್ದರಿಂದ ಬಾರೀ ಅನಾಹುತ ತಪ್ಪಿದೆ.
ಎದೆನೋವು ಎಂದು ಬಸ್ಸಿನೊಳಗೆ ಬಂದು ಬಿದ್ದಿದ್ದು, ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತ ರವಿ ಲಮಾಣಿ ಕೊಪ್ಪಳ ಮೂಲದವರು ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಮೂಡಿಗೆರೆ ಡಿಪೋದಲ್ಲಿ ಚಾಲಕರಾಗಿದ್ದರು. ಜನರಿಗೆ ಉತ್ತಮ ಸೇವೆ ನೀಡುತ್ತಿದ್ದರು.
ಮೃತರು ತಂದೆ ತಾಯಿ, ಪತ್ನಿ, ಮೂವರು ಗಂಡುಮಕ್ಕಳನ್ನು ಅಗಲಿದ್ದಾರೆ.
ಮೂಡಿಗೆರೆ ಎಂ.ಜಿ.ಎಂ.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಕಾರ್ಯಾಚರಣೆ ವೇಳೆ ಕಾಡಾನೆ ಸಾವು : ಮೂಡಿಗೆರೆ ತಾಲ್ಲೂಕು ಮೇಕನಗದ್ದೆಯಲ್ಲಿ ಘಟನೆ