October 5, 2024

ಮೂಡಿಗೆರೆ ಪಟ್ಟಣದಿಂದ ಚಿಕ್ಕಮಗಳೂರು, ಬೇಲೂರು, ಮಂಗಳೂರು ತೆರಳುವ ರಾಷ್ಟ್ರೀಯ ಹೆದ್ದಾರಿಯನ್ನು ಒಂದು ತಿಂಗಳಲ್ಲಿ ಅಗಲೀಕರಣಕ್ಕೆ ಮುಂದಾಗಬೇಕು. ಇಲ್ಲವಾದರೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆ ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ ಎಚ್ಚರಿಕೆ ನೀಡಿದರು.

ಮೂಡಿಗೆರೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಬೇಕೆಂದು ಅನೇಕ ವರ್ಷದಿಂದ ಒತ್ತಾಯ ಮಾಡುತ್ತಾ ಬಂದಿದ್ದರೂ ಆಳುವ ಸರಕಾರ, ಜನಪ್ರತಿನಿಧಿಗಳು ತಲೆ ಕೆಡಿಸಿಕೊಂಡಿಲ್ಲ. ವಾಹನ ದಟ್ಟಣೆ ಅಧಿಕವಾಗಿದ್ದು, ರಸ್ತೆ ಕಿರಿದಾಗಿದ್ದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿದ್ದು, ಸಾವು ನೋವು ಉಂಟಾಗುತ್ತಿದೆ. ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಮಂತ್ರಿಯಾಗಿದ್ದಾರೆ. ಸರಕಾರದ ಗಮನ ಸೆಳೆದು ರಸ್ತೆ ಅಗಲೀಕರಣ ಮಾಡಿಸುವುದು ಅವರ ಕರ್ತವ್ಯವಾಗಿದೆ. ಆದರೆ ಯಾವುದಕ್ಕೂ ತಲೆ ಕೆಡಸಿಕೊಂಡಂತಿಲ್ಲ. ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ರೈತಸಂಘದ ತಾಲೂಕು ಅಧ್ಯಕ್ಷ ಡಿ.ಆರ್.ಪುಟ್ಟಸ್ವಾಮಿ ಮಾತನಾಡಿ, ಮೂಡಿಗೆರೆ ಪಟ್ಟಣದಲ್ಲಿ ಕೆ.ಎಂ. ರಸ್ತೆ ಮತ್ತು ಎಂ.ಜಿ. ರಸ್ತೆಯನ್ನು ಅಗಲೀಕರಣ ಮಾಡಬೇಕು ಎಂದು ಬಹಳಷ್ಟು ವರ್ಷಗಳಿಂದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳು ಇದರ ಬಗ್ಗೆ ಗಮನಹರಿಸುತ್ತಿಲ್ಲ. ಈ ಹಿಂದೆ ರಾಜ್ಯ ಹೆದ್ದಾರಿಯಾಗಿದ್ದಾಗ ರಸ್ತೆ ಅಗಲೀಕರಣಕ್ಕೆ ಅನೇಕ ಸಭೆ ನಡೆಸಲಾಗಿತ್ತು. ನಂತರ ರಾಷ್ಟ್ರೀಯ ಹೆದ್ದಾರಿಯಾದ ಬಳಿಕ ರಸ್ತೆ ಅಗಲೀಕರಣದ ಬಗ್ಗೆ ಜನಪ್ರತಿನಿಧಿಗಳು ಚಕಾರವೇ ಎತ್ತುತ್ತಿಲ್ಲ. ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ಅಗಲೀಕರಣಗೊಂಡಿದೆ. ಆದರೆ ಮೂಡಿಗೆರೆ ತಾಲೂಕಿನಲ್ಲಿ ಮಾತ್ರ ಸಾಧ್ಯವಾಗಿಲ್ಲ. ಇನ್ನಾದರೂ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು. ಇಲ್ಲವಾದರೆ ವಿವಿಧ ಸಂಘಟನೆಗಳೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ