October 5, 2024

ಮೂಡಿಗೆರೆ ತಾಲ್ಲೂಕಿನ ಜೋಗಣ್ಣಕೆರೆ-ಅಚಬೂರು ಗ್ರಾಮದ ಹಿರಿಯ ಕಾಂಗ್ರೇಸ್ ಮುಖಂಡ ಹೆಚ್.ಬಿ. ಲಕ್ಷ್ಮಣ (83) ಅವರು ಬುಧವಾರ ನಿಧನ ಹೊಂದಿದರು. ಅವರ ಅಂತ್ಯಸಂಸ್ಕಾರ ಇಂದು ಸಂಜೆ 4 ಗಂಟೆಗೆ ಅಬಚೂರು ಗ್ರಾಮದಲ್ಲಿ ನೆರವೇರಲಿದೆ.

ಕಾಫಿ ಬೆಳೆಗಾರರಾದ ಹೆಚ್.ಬಿ. ಲಕ್ಷ್ಮಣ್ ಅವರು ರಾಜಕೀಯವಾಗಿ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಹಲವು ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು. ಜೋಗಣ್ಣಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ದಾರದಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಇವರು ಸೇವೆ ಸಲ್ಲಿಸಿದ್ದರು.

ತಮ್ಮ ಗ್ರಾಮ ಹಾಗೂ ಸುತ್ತಮುತ್ತಲ ಸಾರ್ವಜನಿಕ ಕಾರ್ಯಗಳಲ್ಲಿ ಇವರು ಸಕ್ರಿಯರಾಗಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ಪತ್ನಿ. ಮೂವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ.

ನೇತ್ರ ದಾನ : 83 ವರ್ಷಗಳ ತುಂಬು ಜೀವನ ನಡೆಸಿದ್ದ ಹೆಚ್.ಬಿ. ಲಕ್ಷ್ಮಣ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರು ಬದುಕಿದ್ದಾಗಲೇ ತಮ್ಮ ಸಾವಿನ ನಂತರ ಕಣ್ಣುಗಳನ್ನು ದಾನ ಮಾಡುವಂತೆ ಕುಟುಂಬದವರಿಗೆ ಸೂಚನೆ ನೀಡಿದ್ದರು. ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಅವರ ಕಣ್ಣುಗಳು ಆರೋಗ್ಯಪೂರ್ಣವಾಗಿದ್ದವು, ಕನ್ನಡಕ ಬಳಸದೇ ಪತ್ರಿಕೆ ಮತ್ತು ಪುಸ್ತಕಗಳನ್ನು ಸಲೀಸಾಗಿ ಓದುತ್ತಿದ್ದರು.

ಅವರ ಅಪೇಕ್ಷೆಯಂತೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ನೆರವಿನೊಂದಿಗೆ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ನಿನ್ನೆ ಸಂಜೆ ಅವರ ಮನೆಗೆ ಆಗಮಿಸಿದ್ದ ಚಿಕ್ಕಮಗಳೂರು ನೇತ್ರ ತಜ್ಞರು ಅವರ ಕಣ್ಣುಗಳನ್ನು ಸುರಕ್ಷಿತವಾಗಿ ತೆಗೆದು ಜಿಲ್ಲಾಸ್ಪತ್ರೆಗೆ ಕೊಂಡೊಯ್ದಿದ್ದಾರೆ ಎಂದು ಅವರ ತಮ್ಮನ ಮಗ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಮಯೂರ್ ಮಾಹಿತಿ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ