ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮೂಡಿಗೆರೆ ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲ್ಲೂಕಿನ ಹಿರಿಯ ಮುಖಂಡರುಗಳಾಗಿದ್ದ ದಿವಂಗತ ಹಳಸೆಬೈರೆಗೌಡರ ಸ್ಮಾರಕ ಮತ್ತು.ದಿವಂಗತ ಡಿ.ಎಸ್.ಕೃಷ್ಣಪ್ಪಗೌಡರ ಸ್ಮಾರಕ ದತ್ತಿ ಉಪನ್ಯಾಸವನ್ನು ಎರ್ಪಡಿಸಲಾಗಿತ್ತು.
ದತ್ತಿ ಉಪನ್ಯಾಸದಲ್ಲಿ ಉಪನ್ಯಾಸಕರಾಗಿ ವಾಸುದೇವ ಮತ್ತು ಭಾಗ್ಯಲಕ್ಷ್ಮಣಗೌಡ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ. ತಾಲ್ಲೂಕು ಅಧ್ಯಕ್ಷರಾದ ಹೆಚ್.ಎಂ. ಶಾಂತಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಸಹೊದರಿ ಭಾಗ್ಯ ಹಾಗೂ ಸಹೊದರಿಯರು ತಾಲೂಕಿನ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.