ಕಳ್ಳತನ ಆರೋಪಿಯೊಬ್ಬನಿಗೆ ನ್ಯಾಯಾಲದಿಂದ ಶಿಕ್ಷೆ ಆಗಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಿಸಿದ ಸರ್ಕಾರಿ ಅಭಿಯೋಜಕರಿಗೆ ಮತ್ತು ನ್ಯಾಯಾಲಯದ ಪೊಲೀಸ್ ಸಿಬ್ಬಂದಿಗೆ ಚಿಕ್ಕಮಗಳೂರು ಎಸ್ಪಿ ಕಛೇರಿಯಲ್ಲಿ ಸನ್ಮಾನಿಸಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣಾ ಮೊ. ನಂ. 15/2017 ರೀತ್ಯಾ ದಾಖಲಾಗಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಆರೋಪಿ ಸುರೇಶ್ @ ಸೂರಿ ಈತನಿಗೆ ಘನ ನ್ಯಾಯಾಲಯವು 3 ವರ್ಷ ಶಿಕ್ಷೆ ಮತ್ತು ರೂ. 20,000/- ದಂಡ ವಿಧಿಸಿತ್ತು.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದವನ್ನು ಮಂಡಿಸಿದ ಪ್ರಧಾನ ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ. ರೂಪಾ ಟಿ ಮತ್ತು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸರಿಯಾದ ಸಮಯಕ್ಕೆ ಸಾಕ್ಷಿದಾರರುಗಳನ್ನು ಹಾಜರುಪಡಿಸಿದ ನ್ಯಾಯಾಲಯದ ಸಿಬ್ಬಂದಿಯಾದ ಸುನೀಲ್ ನಾಯ್ಕ್, ಸಿಪಿಸಿ, ಮೂಡಿಗೆರೆ ಪೊಲೀಸ್ ಠಾಣೆ ರವರನ್ನು ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸನ್ಮಾನಿಸಿ, ಪ್ರಶಂಸನಾ ಪತ್ರವನ್ನು ನೀಡಿದರು.