ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿಯರ ಸಂಘದ ಸದಸ್ಯರು ಬುಧವಾರ ಮೂಡಿಗೆರೆ ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮಾಜಿ ಸಚಿವೆ ಮೋಟಮ್ಮ ಅವರಿಗೆ ಮನವಿ ಸಲ್ಲಿಸಿದರು.
ಈ ಬಾರಿ ಬಜೆಟ್ನಲ್ಲಿ ರಾಜ್ಯ ಸರಕಾರ ಉತ್ತಮವಾದ ಬಜೆಟ್ ಮಂಡನೆ ಮಾಡಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರು 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15 ಸಾವಿರ ಹಾಗೂ ಸಹಾಯಕಿಯರಿಗೆ 10 ಸಾವಿರ ರೂ ಹೆಚ್ಚಿಸಲಾಗುವುದು. ಅಲ್ಲದೇ ನಿವೃತ್ತಿ ಹೊಂದಿದವರಿಗೆ 3 ಲಕ್ಷ ಇಡುಗಂಟು ಮಾಡುವ ಭರವಸೆ ನೀಡಲಾಗಿತ್ತು. ಆದರೆ ಆ ಭರವಸೆ ಜಾರಿ ಮಾಡಿರುವುದಿಲ್ಲ. ಹಾಗಾಗಿ ಶಾಸಕರು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆದು ನಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸಂಘದ ಅಧ್ಯಕ್ಷೆ ಕೆ.ಆರ್.ಶೈಲಾ, ಪ್ರಧಾನ ಕಾರ್ಯದರ್ಶಿ ವನಜಾಕ್ಷಿ, ದೀಪಿಕಾ, ಗೌರಿ, ಶೋಭಾ., ಸತ್ಯ, ರಮ್ಯ, ಅಶ್ವಿನಿ, ಶಿಲ್ಪ, ವೀಣಾ ಅನ್ನಪೂರ್ಣ, ಗೌರಮ್ಮ ಮತ್ತಿತರಿದ್ದರು.