October 5, 2024

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವತಿಯಿಂದ ಪಕ್ಷದ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವು ಪಟ್ಟಣದ ಜಾಮಿಯಾ ಶಾದಿ ಮಹಲ್ ನಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಂಗಡಿ ಚಂದ್ರು ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ರವರು ಮಾತನಾಡಿ ಪ್ರಸ್ತುತ ಹಾಗೂ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಕುರಿತು ವಿಚಾರ ಮಂಡಿಸಿದರು.

SSPI ರಾಜ್ಯ ಕಾರ್ಯದರ್ಶಿ ಆನಂದ್ ಮಿತ್ತಬೈಲ್ ರವರು ಮಾತನಾಡಿ ಪ್ರಸಕ್ತ ಸನ್ನಿವೇಶದಲ್ಲಿ SDPI ಪಕ್ಷದ ಅನಿವಾರ್ಯತೆಯ ಬಗ್ಗೆ ವಿವರಿಸಿ ಸದೃಢ ಭವಿಷ್ಯ ನಿರ್ಮಾಣಕ್ಕಾಗಿ, ಸ್ವಾಭಿಮಾನದ ರಾಜಕೀಯಕ್ಕಾಗಿ SDPI ಸೇರಿರಿ ಎಂದು ಸವಿಸ್ತಾರವಾಗಿ ವಿವರಿಸಿದರು.

SDPI ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾದ ಗೌಸ್ ಮುನೀರ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಹಾಗೂ ರಾಜ್ಯ ಕಾರ್ಯದರ್ಶಿ ಆನಂದ್ ಮಿತ್ತಬೈಲ್ ರವರ ಸಮ್ಮುಖದಲ್ಲಿ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು 30 ಕ್ಕೂ ಹೆಚ್ಚು ಯುವಕರು ಪಕ್ಷಕ್ಕೆ ಸೇರ್ಪಡೆ ಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಝ್ಮತ್ ಪಾಷಾ ಹಾಗೂ ಮುಬಾರಕ್, ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಕೆ.ಪಿ ಖಾಲಿದ್, ಜಿಲ್ಲಾ ಸಮಿತಿ ಸದಸ್ಯರಾದ ಮುಸ್ತಫಾ ಆಲ್ದೂರು, ಮೂಡಿಗೆರೆ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ರಿಜ್ವಾನ್ ಪಲ್ಗುಣಿ, ಪ್ರಮುಖರಾದ ಸಿಕಂದರ್, ನಾಗೇಶ್ ಸಾಲುಮರ, ಸಂತೋಷ್, ಜಾವೀದ್, ಮಹಮ್ಮದ್ ರಫೀಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ