October 5, 2024

ಚಿಕ್ಕಮಗಳೂರು ನಗರದಲ್ಲಿ  ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಮಾರ್ಚ್ 10 ರಂದು ಏರ್ಪಡಿಸಲಾಗಿದೆ ಎಂದು ಚಿಕ್ಕಮಗಳೂರು ಕೆನಲ್ ಕ್ಲಬ್ ಅಧ್ಯಕ್ಷ ಕವೀಶ್ ಕುಮಾರ್ ತಿಳಿಸಿದರು.

ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಪಶುಸಂಗೋಪನೆ ಇಲಾಖೆ ಮತ್ತು ಚಿಕ್ಕಮಗಳೂರು ಕೆನಲ್ ಕ್ಲಬ್ ಇವರುಗಳ ಸಹಯೋಗದಲ್ಲಿ ಈ ಶ್ವಾನ ಪ್ರದರ್ಶನ ಏರ್ಪಡಿಸಲಾಗಿದ್ದು, 25 ರಿಂದ 30 ವಿವಿಧ ದೇಶೀಯ ತಳಿ ಶ್ವಾನಗಳು ಭಾಗವಹಿಸಲಿವೆ. ಈ ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಲಿಚ್ಚಿಸುವವರು 499 ರೂ ಗಳನ್ನು ಪಾವತಿಸಿ ನೊಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ಆಯ್ಕೆಯಾದ ತಳಿವಾರು ಉತ್ತಮ ಶ್ವಾನಗಳಿಗೆ ಪ್ರಥಮ ಬಹುಮಾನ 30 ಸಾವಿರ ರೂ, ದ್ವಿತೀಯ 20 ಸಾವಿರ ರೂ. ತೃತೀಯ 15 ಸಾವಿರ ರೂ, 4ನೇ ಬಹುಮಾನ 10 ಸಾವಿರ ಹಾಗೂ 5ನೇ ಬಹುಮಾನ 5 ಸಾವಿರ ರೂ ನಗದು ಬಹುಮಾನ ಮತ್ತು ಟ್ರೋಫಿಯನ್ನು ನೀಡಲಾಗುವುದು ಎಂದು ಹೇಳಿದರು.

ಈ ಶ್ವಾನ ಪ್ರದರ್ಶನದಲ್ಲಿ ಭಾಗವಹಿಸುವ ಎಲ್ಲಾ ಶ್ವಾನಗಳಿಗೂ ಉಚಿತ ರೇಬೀಸ್ ಲಸಿಕೆಯನ್ನು ನೀಡಲಾಗುವುದು. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ 200 ನೋಂದಣಿಯಾಗಿದ್ದು, 500 ನೋಂದಣಿಯಾಗುವ ನಿರೀಕ್ಷೆ ಇದೆ. ಇದೇ ಕಾರ್ಯಕ್ರಮದಲ್ಲಿ 1 ಸಾವಿರ ಗಿಡಗಳನ್ನು ವಿತರಣೆ ಮಾಡಲು ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಲಬ್ ಖಜಾಂಚಿ ದೀಪಕ್ ಸುವರ್ಣ, ಸದಸ್ಯರುಗಳಾದ ರಂಜಿತ್ ಶೆಟ್ಟಿ, ಚಂದನ್, ಉದಯ್‌ಕುಮಾರ್, ಪುನೀತ್ ಮತ್ತಿತರರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ