ಚಿಕ್ಕಮಗಳೂರಿನ ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ 100 ಅಡಿ ಕೆಳಕ್ಕೆ ಉರುಳಿ ಬಿದ್ದಿದ್ದು ತೀವ್ರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಸವಾಜ್ (6 ವರ್ಷ) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಬಸ್ಸಿನಲ್ಲಿ ಬಂದಿದ್ದ ಪ್ರವಾಸಿಗರು.
ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು
ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
23 ಜನರಿಗೆ ಸಣ್ಣಪುಟ್ಟ ಗಾಯ, 6 ಜನರಿಗೆ ಗಂಭೀರ ಗಾಯವಾಗಿದ್ದು ಓರ್ವ ಬಾಲಕ ಮೃತಪಟ್ಟಿದ್ದಾನೆ.
ಗಾಯಾಳುಗಳು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.