October 5, 2024

ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ತೀವ್ರ ಪೆಟ್ಟಾಗಿದೆ. ಚಿಕ್ಕಮಗಳೂರು ತಾಲೂಕಿನ ದಂಬದಹಳ್ಳಿ ಬಳಿ ಬಂಟರಭವನ ಸಮೀಪ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ಗಾಯಗೊಂಡವಳು.  ಶಿವರಾಜ್-ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಜಾವಗಲ್ ಸಮೀಪದ ಬಂದೂರು ಮೂಲದವರು. ಲಾವಣ್ಯ ಚಿಕ್ಕಮಗಳೂರಿನ  ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಳು.

ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಇವರ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿ ಪರಸ್ಪರರು ದೂರವಿರುವಂತೆ ತಿಳಿಹೇಳಿದ್ದರು . ಪಿ.ಯು.ಸಿ. ನಂತರ ಲಾವಣ್ಯಳನ್ನು ಚಿಕ್ಕಮಗಳೂರು ಪ್ಯಾರಾ ಮೆಡಿಕಲ್ ಕಾಲೇಜಿಗೆ ಸೇರಿಸಿದ್ದರು.

ಆದರೆ ಇವರಿಬ್ಬರು ಪರಸ್ಪರ ಭೇಟಿಯಾಗುವುದನ್ನು ನಿಲ್ಲಿಸಿರಲಿಲ್ಲ. ಸೋಮವಾರ ಚಿಕ್ಕಮಗಳೂರಿಗೆ ಬಂದಿದ್ದ ಶಿವರಾಜ್ ಲಾವಣ್ಯಳನ್ನು ಮೂಡಿಗೆರೆ ಭಾಗದ ಪ್ರವಾಸಿ ತಾಣಕ್ಕೆ ತನ್ನ ಬೈಕಿನಲ್ಲಿ ಕರೆದೊಯ್ದಿದ್ದ, ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ದಂಬದಹಳ್ಳಿ ಸಮೀಪ ಬರುವಾಗ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಶಿವರಾಜ್ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಹಿಂಬದಿಯಲ್ಲಿ ಕುಳಿತ್ತಿದ್ದ ಲಾವಣ್ಯಳಿಗೂ ತೀವ್ರ ಪೆಟ್ಟಾಗಿದ್ದು, ಆಕೆಯ ನಾಲಿಗೆಯೇ ಕಟ್ಟಾಗಿದೆ ಎನ್ನಲಾಗುತ್ತಿದೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಆಸ್ಪತ್ರೆಯ ಬಳಿ ನೆರೆದಿದ್ದ ಮೃತನ ಸಂಬಂಧಿಕರ ರೋಧನ ಮುಗಿಲು ಮುಟ್ಟಿತ್ತು.

ಒಟ್ಟಾರೆ ಯುವ ಪ್ರೇಮಿಗಳ ಪೈಕಿ ಯುವಕನ ಬದುಕು ದುರಂತ ಅಂತ್ಯ ಕಂಡಿದ್ದರೆ, ಯುವತಿ ಜೀವನಪರ್ಯಂತ ನೋವಿನಲ್ಲಿ ಬದುಕುವಂತಹ ಸ್ಥಿತಿ ತಂದೊಡ್ಡಿದೆ ಈ ಅಪಘಾತ.

ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ