ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಬಳಿ ಸಿಡಿಲು ಬಡಿದು ಇಬ್ಬರು ಮಹಿಳೆಯರ ಮೃತಪಟ್ಟಿದ್ದಾರೆ.
ಕೂಲಿ ಕಾರ್ಮಿಕರಾದ ಮುತ್ತಮ್ಮ(70), ಪುಟ್ಟಮ್ಮ(63) ಎಂಬುವವರು ಸಾವನ್ನಪ್ಪಿರುವ ಮಹಿಳೆಯರು.
ಇಂದು ಬುಧವಾರ ಮಧ್ಯಾಹ್ನ ಹೊಲದಲ್ಲಿ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಮಳೆ ಬಂದಿದೆ. ಈ ಹಿನ್ನಲೆಯಲ್ಲಿ ಮರದ ಕೆಳಗೆ ಆಶ್ರಯ ಪಡೆದಿದ್ದಾಗ ಸಿಡಿಲು ಬಡಿದಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಮಹಿಳೆಯರು ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಅರಕಲಗೂಡು ಶಾಸಕ ಎ.ಮಂಜು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.