ಚಿಕ್ಕಮಗಳೂರು ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಗ್ರಾಹಕರೊಬ್ಬರಿಗೆ ಇ-ಸ್ವತ್ತು ಮಾಡಿಕೊಡಲು ಏಳು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರದೀಪ್ 3000 ಮುಂಗಡ ಹಣ ಫೋನ್ ಪೇಯಲ್ಲಿ ಹಾಕಿಸಿಕೊಂಡಿದ್ದ , ಇಂದು 2000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ರಾಕೇಶ್ ಎಂಬುವವರಿಂದ ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಲೋಕಾಯುಕ್ತ ಅಧಿಕಾರಿ ಅನಿಲ್ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ವೇಳೆಯೇ ಪ್ರದೀಪ್ ನನ್ನು ಬಂಧಿಸಿದ್ದಾರೆ.