ಕೇಂದ್ರ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಕಡೂರು ತಾಲ್ಲೂಕು ಜೆ.ಡಿ.ಎಸ್. ಯುವ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ಕಡೂರು ಜೆಡಿಎಸ್ ಮುಖಂಡರಾದ ಹರ್ಷಿತ್ ಕಡೂರು ಹಾಗೂ ಬೀರೂರಿನ ಪುರಸಭಾ ಸದಸ್ಯರಾದ ಮೋಹನ್ ಕುಮಾರ್ ಮತ್ತು ಡಿಎಸ್ಎಸ್ ಸಂಘಟನೆಯ ಮುಖಂಡರಾದ ಹಾಗೂ ಜೆಡಿಎಸ್ ನ ಯುವ ಮುಖಂಡರಾದ ಬೀರೂರು ಗಣೇಶ್ ಹಾಗೂ ಮಂಜು ಮಚ್ಚೇರಿ ಇವರು ಮಾಜಿ ಶಾಸಕ ವೈ ಎಸ್ ವಿ ದತ್ತ ಅವರ ನೇತೃತ್ವದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು.