ಅಂಗವಾಗಿ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಟ್ಟಣದ ಜೆ.ಎಂ ರಸ್ತೆಯಲ್ಲಿರುವ ಪಕ್ಷದ ಕಛೇರಿಯ ಬಳಿ ಧ್ವಜಾರೋಹಣ ಕಾರ್ಯಕ್ರಮ ಜರಗಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ SDPI ಮೂಡಿಗೆರೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಂಗಡಿ ಚಂದ್ರು ರವರು ಪಕ್ಷವು ಕಳೆದ 15 ವರ್ಷದಲ್ಲಿ ನಡೆಸಿದ ಹೋರಾಟ ರಾಜಕೀಯದ ಬಗ್ಗೆ ವಿವರಿಸಿ ಪಕ್ಷವನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಗೊಳಿಸಿ ಹಸಿವು ಮುಕ್ತ ಭಯ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ಕಟಿಬದ್ಧರಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಕೋಶಾಧಿಕಾರಿ ಕೆ.ಪಿ ಖಾಲಿದ್, ಮೂಡಿಗೆರೆ ವಿಧಾನಸಭಾ ಕಾರ್ಯದರ್ಶಿ ರಿಜ್ವಾನ್ ಪಲ್ಗುಣಿ, ಕಾರ್ಯದರ್ಶಿ ನಾಗೇಶ್ ಸಾಲುಮರ, ಸಂತೋಷ್, ಆತೀಫ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.