ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಪಕ್ಷದ ಹಿರಿಯ ಮುಖಂಡ ಹಾಗೂ ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರಿಗೆ ನೀಡಬೇಕು ಎಂದು ಕಡೂರು ಕ್ಷೇತ್ರದ ಜೆಡಿಎಸ್ ಯುವ ಮುಖಂಡರ ಹರ್ಷಿತ್ ಕಡೂರು ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಾಲಿ ಜೆ.ಡಿ.ಎಸ್. ರಾಜ್ಯಾಧ್ಯಕ್ಷರಾಗಿರುವ ಹೆಚ್.ಡಿ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಮುಂದೆ ರಾಜ್ಯದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನದ ವಿಚಾರ ಬಂದಾಗ ವೈಎಸ್ ವಿ ದತ್ತಾ ಅವರನ್ನು ಪ್ರಮುಖವಾಗಿ ಪರಿಗಣಿಸಿ ಅವಕಾಶ ನೀಡಬೇಕು ಎಂದು ಕಡೂರು ಭಾಗದ ಜೆ.ಡಿ.ಎಸ್. ಯುವ ಕಾರ್ಯಕರ್ತರು ಮನದಿಂಗಿತವಾಗಿದೆ.
ಅತ್ಯಂತ ಪ್ರಾಮಾಣಿಕರಾಗಿರುವ ಮತ್ತು ಉತ್ತಮ ವಾಗ್ಮಿಗಳಾಗಿರುವ ಹಾಗೂ ರಾಜಕೀಯದ ಬಗ್ಗೆ ಸುದೀರ್ಘ ಅನುಭವ ಹೊಂದಿ, ಜನರ ಪ್ರೀತಿ ವಿಶ್ವಾಸ ಗಳಿಸಿರುವ ದತ್ತಣ್ಣ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ರಾಜ್ಯದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಸಾಧ್ಯ ಎಂದು ಯುವ ಮತ್ತು ಹಿರಿಯ ಜೆಡಿಎಸ್ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಹಿರಿಯ ನಾಯಕರು ಚಿಂತನೆ ನಡೆಸಬೇಕು ಎಂದು ಹರ್ಷಿತ್ ಮನವಿ ಮಾಡಿದ್ದಾರೆ.