October 5, 2024

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಪೊಲೀಸ್‌ ಕಾನ್‌ಸ್ಟೇಬಲ್‌  ಒಬ್ಬ ತನ್ನ ಪತ್ನಿಯನ್ನು  ಇರಿದು ಕೊಂದುಹಾಕಿದ   ಘಟನೆ ಇಂದು ಬೆಳಿಗ್ಗೆ ಹಾಸನದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.  ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಪತ್ನಿ ಮಮತಾ ಹತ್ಯೆಯಾದವರು. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಇವರ ನಡುವೆ ತೀವ್ರ ಒಡಕು ಮೂಡಿಸಿತ್ತು ಎನ್ನಲಾಗಿದೆ. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ವ್ಯಗ್ರನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ