ಕೇಂದ್ರ ಬಜೆಟ್ ನ ಪ್ರಮುಖ ಘೋಷಣೆಗಳು
-
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅಡಿಯಲ್ಲಿ ನೀಡಲಾಗುತ್ತಿರುವ 5 ಕೆಜಿ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರೆಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.
- ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆಯನ್ನು ಸಿದ್ದಪಡಿಸುವಿಕೆ
- ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪನೆ
- ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರಾಷ್ಟ್ರೀಯ ಸಹಕಾರ ನೀತಿ
- ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ.
- ಆಂಧ್ರಪ್ರದೇಶಕ್ಕೆ 15,000 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.
- ಸರ್ಕಾರವು ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರವಾಗಿ ಇ-ವೋಚರ್ಗಳನ್ನು ನೀಡಲಿದ್ದು, ಇದರಲ್ಲಿ ಸಾಲದ ಮೊತ್ತದ ಮೇಲೆ ಶೇಕಡಾ ಮೂರರಷ್ಟು ಬಡ್ಡಿ ಸಬ್ಸಿಡಿ
- ಉದ್ಯೋಗಕ್ಕೆ ಸಂಬಂಧಿಸಿದ ಮೂರು ಯೋಜನೆಗಳನ್ನು ಸರ್ಕಾರ ಆರಂಭ
- ಪೂರ್ವ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಪ್ರಸ್ತಾವನೆ.
- ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ
- 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್ಪ್ರೆಸ್ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ
- ಎಲ್ಲಾ ಔಪಚಾರಿಕ ವಲಯಗಳಲ್ಲಿ ಕೆಲಸ ಮಾಡಲು ಬರುವ ಎಲ್ಲಾ ಹೊಸ ಜನರಿಗೆ ಒಂದು ತಿಂಗಳ ವೇತನ ಇಪಿಎಫ್ಒದಲ್ಲಿ ನೋಂದಾಯಿಸಿದ ಮೊದಲ ಬಾರಿಯ ಉದ್ಯೋಗಿಗಳಿಗೆ 3 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಅಡಿಯಲ್ಲಿ ಒಂದು ತಿಂಗಳ ಸಂಬಳ ರೂ 15,000 ವರೆಗೆ ನೀಡುವಿಕೆ
- ಹವಾಮಾನ ಸ್ನೇಹಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ತಜ್ಞರು ಮತ್ತು ಇತರರಿಗೆ ಹಣವನ್ನು ಒದಗಿಸುವಿಕೆ
- ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಸರ್ಕಾರ ಒಂದು ತಿಂಗಳ ಪಿಎಫ್ ಕೊಡುಗೆ ನೀಡುವ ಮೂಲಕ ಪ್ರೋತ್ಸಾಹ
- ಸರಕಾರ ಸೀಗಡಿ ಸಾಕಾಣಿಕೆ ಮತ್ತು ಮಾರುಕಟ್ಟೆಗೆ ಹಣಕಾಸು ಒದಗಿಸುವಿಕೆ
- ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಾಗಿ ಹೆಚ್ಚಿನ ಎಫ್ಪಿಒಗಳನ್ನು ರಚಿಸಲಾಗುವುದು, ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು
- ಮಹಿಳೆಯರು, ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ 3 ಲಕ್ಷ ಕೋಟಿ ರೂಪಾಯಿ-ಹಣಕಾಸು ಸಚಿವೆ ನಿರ್ಮಲಾ
- ಮುದ್ರಾ ಸಾಲ ಯೋಜನೆಯಡಿ ಸಾಲದ ಮಿತಿಯನ್ನು 20 ಲಕ್ಷಕ್ಕೆ ದ್ವಿಗುಣಗೊಳಿಸಲಾಗುವುದು
- ಮುಂದಿನ 5 ವರ್ಷಗಳಲ್ಲಿ 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುವ ಯೋಜನೆಯನ್ನು ಸರ್ಕಾರ ಪ್ರಾರಂಭಿಸಲಿದೆ
- 100 ನಗರಗಳಲ್ಲಿ ಹೂಡಿಕೆಗೆ ಸಿದ್ಧವಾಗಿರುವ ಕೈಗಾರಿಕಾ ಪಾರ್ಕ್ ಗಳಿಗೆ ಸರ್ಕಾರ ಉತ್ತೇಜನ-
- ಮುಂದಿನ ಐದು ವರ್ಷಗಳಲ್ಲಿ ನಗರ ವಸತಿಗೆ 2.2 ಲಕ್ಷ ಕೋಟಿ ರೂಪಾಯಿಗಳ ಕೇಂದ್ರ ನೆರವು ಮತ್ತು ನಗರ ವಸತಿ ಕಾಮಗಾರಿಗಳಿಗೆ ಕೈಗೆಟುಕುವ ದರದಲ್ಲಿ ಸಾಲವನ್ನು ನೀಡಲು ಬಡ್ಡಿ ಸಬ್ಸಿಡಿ
-
ನೈಸರ್ಗಿಕ ಕೃಷಿಗೆ ಒತ್ತು: ಮುಂದಿನ 2 ವರ್ಷಗಳಲ್ಲಿ 2 ಕೋಟಿ ರೈತರಿಗೆ ಬೆಂಬಲ
- ಎಸ್ಸಿ, ಎಸ್ಟಿ, ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು. ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು.
- 1 ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್
ಕೈಗಾರಿಕಾ ಕಾರ್ಮಿಕರಿಗೆ ಬಾಡಿಗೆ ಮನೆ ನಿರ್ಮಾಣ, ದೇಶದ ಆಯ್ದ 100 ನಗರಗಳ ಅಭಿವೃದ್ಧಿ, ಆಯ್ದ ನಗರಗಳಲ್ಲಿ 100 ಫುಡ್ ಸ್ಟ್ರೀಟ್ ನಿರ್ಮಾಣ, 1 ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಸೌಕರ್ಯ ಘೋಷಿಸಲಾಗಿದೆ.
-
ಹೊಸ ತೆರಿಗೆ ಸ್ಲ್ಯಾಬ್ಗಳು:
3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ
3 ಲಕ್ಷದಿಂದ 7 ಲಕ್ಷದವರೆಗಿನ ಆದಾಯಕ್ಕೆ ಶೇ.5 ತೆರಿಗೆ
7 ಲಕ್ಷದಿಂದ 10 ಲಕ್ಷದವರೆಗಿನ ಆದಾಯಕ್ಕೆ ಶೇ.10 ತೆರಿಗೆ
10 ಲಕ್ಷದಿಂದ 12 ಲಕ್ಷದವರೆಗಿನ ಆದಾಯಕ್ಕೆ ಶೇ.15 ತೆರಿಗೆ
12 ಲಕ್ಷದಿಂದ 15 ಲಕ್ಷದವರೆಗಿನ ಆದಾಯಕ್ಕೆ ಶೇ.20 ತೆರಿಗೆ
15 ಲಕ್ಷಕ್ಕಿಂತ ಹೆಚ್ಚಿನ ಆದಾಯಕ್ಕೆ 30% ತೆರಿಗೆ
- NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ
ಎನ್ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಬಜೆಟ್ನಲ್ಲಿ ಘೋಷಣೆಗಳನ್ನು ಮಾಡಲಾಗಿದೆ.