ಚಿಕ್ಕಮಗಳೂರು ಭದ್ರಾ ಹುಲಿ ಮೀಸಲು ವ್ಯಾಪ್ತಿಯಲ್ಲಿ ಜಿಂಕೆ ಶಿಕಾರಿ ಮಾಡಿದ್ದ ತಂಡವನ್ನು ಬಂಧಿಸಲಾಗಿದೆ.
ಮೀಸಲು ಅರಣ್ಯ ವ್ಯಾಪ್ತಿಯ ಕೋದಿ ಖಾಸಗಿ ಕಾಫಿ ಎಸ್ಟೇಟ್ನಲ್ಲಿ ಜಿಂಕೆಯನ್ನ ಶಿಕಾರಿ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ತಂಡವನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿದೆ.
ಇಲಾಖೆಯ ಅಧಿಕಾರಿಗಳು ತಡೆದು ಪರಿಶೀಲಿಸಿದಾಗ ಕಾರಿನಲ್ಲಿ ಜಿಂಕೆ ಮಾಂಸ, ಬಂದೂಕು ಪತ್ತೆಯಾಗಿದೆ. ಚುಕ್ಕಿ ಜಿಂಕೆಯನ್ನು ಮಾಂಸಕ್ಕೆ ಬೇಟೆ ಆಡಲಾಗಿದೆ.
ಮಾಂಸ, ಬಂದೂಕು ಸೇರಿದಂತೆ ಕಾರ್ ವಶಪಡಿಸಿಕೊಂಡು ಐವರನ್ನು ಬಂಧಿಸಿದ್ದಾರೆ. ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಸ್ಥಳೀಯ ವಿಜಯಕುಮಾರ್ ಸೇರಿದಂತೆ ಐವರನ್ನು ಬಂಧಿಸಿ ನ್ಯಾಯಾಲಕ್ಕೆ ನೀಡಲಾಗಿದೆ.