ಬೈಕ್ ಮತ್ತು ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಮೂಡಿಗೆರೆ ಬಣಕಲ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಗ್ಗಸಗೊಡು ಬಳಿ ಗುರುವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಬಣಕಲ್ ಸಮೀಪದ ಹೆಗ್ಗುಡ್ಲು ಗ್ರಾಮದ ನಿರಂಜನ್ (25) ಮೃತಪಟ್ಟ ಯುವಕ.
ಮೂಡಿಗೆರೆಯಿಂದ ಹೆಗ್ಗುಡ್ಲು ಎಂಬ ತನ್ನ ಊರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ, ಧರ್ಮಸ್ಥಳದಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಟಾಟಾ ಸುಮೋ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ನಿರಂಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.