ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಆಗಸ್ಟ್ 24 ಮತ್ತು 25ರಂದು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ರಾಜ್ಯಮಟ್ಟದ ನೃತ್ಯ ಸ್ಪರ್ಧೆ, ರಾಜ್ಯಮಟ್ಟದ ಗಾಯನ ಸ್ಪರ್ಧೆ, ಫ್ಯಾಶನ್ ಶೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅನೇಕ ತಂಡಗಳು ಮತ್ತು ಸ್ಪರ್ಧಿಗಳು ಭಾಗವಹಿಸಿದ್ದರು.
ಫ್ಯಾಶನ್ ಶೋ ಸ್ಪರ್ಧೆಯಲ್ಲಿ ನಮ್ಮ ಭಾರತೀಯ ಸಾಂಪ್ರದಾಯಿಕ ಉಡುಪು, ಗ್ರಾಮೀಣ ಬದುಕಿನ ಚಿತ್ರಣಗಳನ್ನು ಅಳವಡಿಸಿಕೊಂಡು ವಿಶಿಷ್ಟವಾಗಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿರುವ ಅನೇಕ ಸ್ಥಳೀಯ ಸಾಧಕರನ್ನು ಸನ್ಮಾನಿಸಲಾಯಿತು. ಮಾಜಿ ಯೋಧರಿಗೆ ಪಾದಪೂಜೆ ಮಾಡುವ ಮೂಲಕ ಗೌರವ ಸಮರ್ಪಣೆ ನೆರವೇರಿಸಿದ್ದು ವಿಶೇಷವಾಗಿತ್ತು.
ಎ.ಎಸ್.ಎನ್. ಕ್ರಿಯೇಷನ್ ಸಂಸ್ಥಾಪಕರಾದ ಅಜಿತ್ ಕ್ಸೇವಿಯರ್, ಶ್ರೀಮತಿ ನವ್ಯ ಅಜಿತ್, ಸುನಿಲ್ ಹಾಗೂ ಅವರ ತಂಡದವರು ಎರಡು ದಿನಗಳ ಆಕರ್ಷಕ ಕಾರ್ಯಕ್ರಮಗಳನ್ನು ಮತ್ತು ಸ್ಪರ್ಧೆಗಳಲ್ಲಿ ಅಚ್ಚುಕಟ್ಟಾಗಿ ನಡೆಸಿಕೊಟ್ಟರು.