October 5, 2024

ಚಿಕ್ಕಮಗಳೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಾವಿರಾರು ನಿವೇಶನ ರಹಿತರಿಗೆ ನಿವೇಶನವನ್ನು ಹಂಚಿ ಶೀಘ್ರವಾಗಿ ಸೂರನ್ನು ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ನಗರ ಘಟಕದಿಂದ ಆಜಾದ್‍ಪಾರ್ಕ್ ವೃತ್ತದಲ್ಲಿ  ಬುಧವಾರ ಪ್ರತಿಭಟನೆ ನಡೆಸಿದರು.

ಬಳಿಕ ಮಾತನಾಡಿದ ಸಿಪಿಐ ತಾಲ್ಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ಚಿಕ್ಕಮಗಳೂರು ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಸಾವಿರಾರು ಬಡ ಕೂಲಿ ಕಾರ್ಮಿಕರ ಕುಟುಂಬಗಳು ಸ್ವಂತದ್ದೆಂದು ಹೇಳಿ ಕೊಂಡು ಸುಖಿ ಜೀವನ ನಡೆಸಲು ಸೂರಿಲ್ಲದೇ ಅಲೆಮಾರಿಗಳಂತೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಸಾವಿರಾರು ಕುಟುಂಬಗಳಿಗೆ ನೆತ್ತಿಯ ಮೇಲೆ ಸೂರಿಲ್ಲ, ನಿವೇಶನ ಮತ್ತು ವಸತಿ ರಹಿತರ ಸಮಸ್ಯೆ ವಿಪರೀತವಾಗಿದೆ. ಅಲ್ಲದೇ ನಾಗರೀಕ ಸೌಲಭ್ಯದ ಹಕ್ಕಿನಿಂದ ವಂಚಿತರಾಗಿ ಬದುಕು ತೀವ್ರ ದುಸ್ತರವಾಗಿದೆ. ಈ ಬಗ್ಗೆ ಅನೇಕ ಭಾರಿ ಪ್ರತಿಭಟನೆ, ಮನವಿಯನ್ನು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ನೀಡಿದರೂ ಪ್ರಯೋ ಜನವಾಗುತ್ತಿಲ್ಲ ಎಂದು ಆರೋಪಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಕುಟುಂಬಕ್ಕೊಂದು ಮನೆಯ ವ್ಯವಸ್ಥೆ ಕಲ್ಪಿಸುವುದಾಗಿ ಚುಣಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಆದರೀಗ ಸರ್ಕಾರ ಅಧಿಕಾರದ ಗದ್ದುಗೆಗೇರಿ ಒಂದೂವರೆ ದಾಟಿದರೂ ನಿವೇಶನ ರಹಿತರ ಸಮಸ್ಯೆಗಳನ್ನು ಇಂದಿಗೂ ಆಲಿಸುತ್ತಿಲ್ಲ ಎಂದು ಅಸಮಾ ಧಾನ ವ್ಯಕ್ತಪಡಿಸಿದರು.

ಹೀಗಾಗಿ ನಗರದಲ್ಲಿ ಬಹಳಷ್ಟು ಬಡಾವಣೆಗಳಲ್ಲಿ ನಿವೇಶನ, ಸೂರುಗಳಿವೆ. ಆದರೆ ಹಕ್ಕುಪತ್ರ ವಿತ ರಿಸಿಲ್ಲ. ಫ್ಲಾಟ್ ಕೊಡುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿ ಫ್ಲಾಟ್‍ಗಳನ್ನು ನೀಡುತ್ತಿಲ್ಲ. ನಗರದ ರಸ್ತೆ ಮತ್ತು ಅಡ್ಡ ರಸ್ತೆಗಳಿಗೆ ವಾರ್ಡ್ ನಂ ಹಾಗೂ ಫಲಕಗಳನ್ನು ಅಳವಡಿಸಿಲ್ಲ ಎಂದು ಹೇಳಿದರು.

ನಗರ ಕಾರ್ಯದರ್ಶಿ ತಂಪಿತಗೌಡ ಮಾತನಾಡಿ ನಗರದ ಸುತ್ತಲಿರುವ ಜಾಗ ಖರೀದಿಸಲು ರಾಜೀ ವ್‍ಗಾಂಧಿ ವಸತಿ ನಿಗಮದಿಂದ ಮಾರ್ಕೆಟ್ ಬೆಲೆ ಮೂರುಪಟ್ಟು ಹಣಕೊಟ್ಟು ಕೊಂಡುಕೊಳ್ಳುವ ಅವಕಾಶ ವಿರುವುದರಿಂದ ನಗರಕ್ಕೆ ಹತ್ತಿರವಿರುವ ಪ್ರದೇಶದಲ್ಲಿ ಜಾಗವನ್ನು ಖರೀದಿ ವಸತಿಗಳನ್ನಾಗಿ ನಿರ್ಮಿಸಿ ಹಂಚಲು ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿಭಟನೆ ಬಳಿಕ ನಗರಸಭಾ ಕಚೇರಿಗೆ ಮನವಿ ಸಲ್ಲಿಸಿ ನಿವೇಶನಕ್ಕೆ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಸಿಪಿಐ ರಾಜ್ಯ ಮಂಡಳಿ ಸದಸ್ಯ ರೇಣುಕಾರಾಧ್ಯ, ಜಿಲ್ಲಾ ಕಾರ್ಯದರ್ಶಿ ರಾಧಾ ಸುಂದ್ರೇಶ್, ಸದಸ್ಯ ವಿಜಯ್‍ಕುಮಾರ್, ನಗರ ಸಹ ಕಾರ್ಯದರ್ಶಿಗಳಾದ ಜ್ಯೋತಿ, ಹೆಚ್.ಕೆ.ಸೋಮೇಗೌ ಡ, ಹಮೀದ ಭಾನು, ಖಜಾಂಚಿ ಸಿ.ವಸಂತ್‍ಕುಮಾರ್ ಮತ್ತಿತರರು ಹಾಜರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ