ಟಾಟಾ ಏಸ್ ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಣಪತಿ ತರಲು ಲಿಂಗದಹಳ್ಳಿಯಿಂದ ತರೀಕೆರೆಗೆ 9 ಜನ ಯುವಕರು ಟಾಟಾಏಸ್ ಮೂಲಕ ತೆರಳುತ್ತಿದ್ದರು.
ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಶನಿವಾರ ಮುಂಜಾನೆ ಈ ದುರ್ಘಟನೆ ನಡೆದಿದೆ
ಶ್ರೀಧರ್ (20) ಧನುಷ್ (20) ಮೃತ ಯುವಕರು
ಇನ್ನಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ರವಾನಿಸಲಾಗಿದೆ.
ಮೂವರು ಯುವಕರಿಗೆ ಹೆಚ್ಚಿನ ಗಾಯವಾಗಿದ್ದು, ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು
ಗಣಪತಿ ತರಲು ಟಾಟಾ ಏಸ್ ನಲ್ಲಿ ಲಿಂಗದಹಳ್ಳಿಯಿಂದ ತರೀಕೆರೆಗೆ ಹೋಗುತ್ತಿದ್ದ ವೇಳೆ ಟಾಟಾ ಏಸ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ದುರ್ಘಟನೆ ನಡೆದಿದೆ.
ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಗಣಪತಿ ಉತ್ಸವದ ಸಂಭ್ರಮದಲ್ಲಿದ್ದ ಸ್ಥಳೀಯರಿಗೆ ಈ ದುರ್ಘಟನೆ ತೀವ್ರ ಆಘಾತ ತಂದಿದೆ.
ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.