ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ ಸ್ಟೇಷನ್ ಬಳಿ ಈ ಘಟನೆ ಸಂಭವಿಸಿದೆ. ಮಂಜುನಾಥ್-ಮಂಗಳ ದಂಪತಿಯ 5 ವರ್ಷದ ಬಾಲಕಿಗೆ ಜ್ವರ ಇತ್ತು ಎಂದು ಮನೆಯಲ್ಲೇ ಬಿಟ್ಟು ಹೋಗಿದ್ದರು.
ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಾಗ ಬಾಲಕಿ ಶವವಾಗಿ ಬಿದ್ದಿದ್ದಳು ಎನ್ನಲಾಗಿದೆ.
ಬಾಲಕಿಯ ಸಾವಿನ ಸುತ್ತ ಹಲವು ಅನುಮಾನ ಕಾಡುತ್ತಿದ್ದು ಸ್ಥಳಕ್ಕೆ ಅಜ್ಜಂಪುರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕೆನ್ನೆ ಹಾಗೂ ಮುಖದ ಮೇಲೆ ಗಾಯದ ಗುರುತು ಇದ್ದು,ಮಗುವಿನ ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ಕಾಣಿಸುತ್ತಿಲ್ಲ.
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಆಗಮಿಸಿದ್ದರು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ