ಡ್ರಾಪ್ ಕೊಡುವ ನೆಪದಲ್ಲಿ ಅಸ್ಸಾಂ ಮೂಲಕ ಕಾರ್ಮಿಕ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ಜೆ.ಸುರಪುರ ಗ್ರಾಮದ ಕೇಶವಮೂರ್ತಿ ಎಂದು ಗುರುತಿಸಲಾಗಿದ್ದು, ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಬೇಲೂರು ಆರ್ಎಂಸಿಯಲ್ಲಿ ಶುಂಠಿ ವಾಷಿಂಗ್ ಕೆಲಸ ಮಾಡಿಕೊಂಡಿದ್ದರು. ಸೆಪ್ಟಂಬರ್ 30 ರಂದು ಆರ್ಎಂಸಿಗೆ ಕೆಲಸಕ್ಕೆ ತೆರಳಲು ವಾಹನ ಕಾಯುತ್ತಿದ್ದ ಮಹಿಳೆಗೆ ಡ್ರಾಪ್ ನೀಡುವುದಾಗಿ ಪುಸಲಾಯಿಸಿ ಬೈಕ್ ಗೆ ಹತ್ತಿಸಿಕೊಂಡ ಆರೋಪಿ ಆಕೆಯನ್ನು ಜೋಳದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಸಂತ್ರಸ್ತ ಮಹಿಳೆ ಬೇಲೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.