ಆಲ್ದೂರ್ ಬಳಿಯ ಗುಲ್ಲನಪೇಟೆಯ ಸತ್ತಿಹಳ್ಳಿ ಗ್ರಾಮದ ನಿರ್ಜನ ಕಾಡಿನ ಪ್ರದೇಶದಲ್ಲಿ ಪ್ರೇಮಿಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುತ್ತಾರೆ.
ಇಂದು ಸಂಜೆಯ ಹೊತ್ತಿಗೆ ಸಾರ್ವಜನಿಕರು ನೋಡಿ ಮಾಹಿತಿ ನೀಡಿರುತ್ತಾರೆ.
ಆಲ್ದೂರು ಠಾಣಾ ಪೊಲೀಸ್ ಸಿಬ್ಬಂದಿಯ ಸಹಯೋಗದೊಂದಿಗೆ ಮೃತ ದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ.
ಮೃತರು ಪ್ರೇಮಿಗಳು ಎಂದು ತಿಳಿದುಬಂದಿದ್ದು, ಯುವತಿ ಸಕಲೇಶಪುರ ತಾಲೂಕಿನ ಹಾನುಬಾಳಿನ ಪೂರ್ವಿಕ ಮತ್ತು ಯುವಕ ಮಲ್ಲಂದೂರು ಸಮೀಪದ ಕಲ್ಲುಗುಡ್ಡ ಗ್ರಾಮದ ದರ್ಶನ್ ಎಂದು ಗುರುತಿಸಲಾಗಿದೆ.
ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕು.