ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ, ಚಿಕ್ಕಮಗಳೂರಿನಲ್ಲಿ 8 ತಿಂಗಳ ಬುನಾದಿ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ 6ನೇ ತಂಡದ ವಿವಿಧ ಜಿಲ್ಲೆಗಳಿಗೆ ಸೇರಿದ 109 ಜನ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮವನ್ನು ಚಿಕ್ಕಮಗಳೂರು ಡಿ.ಎ.ಆರ್. ಕವಾಯತು ಮೈದಾನದಲ್ಲಿ ನಿನ್ನೆ ನಡೆಸಲಾಯಿತು.
ನಿರ್ಗಮನ ಪಥ ಸಂಚಲನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ// ಚಂದ್ರಗುಪ್ತ, ಐಪಿಎಸ್, ಪೊಲೀಸ್ ಉಪ ಮಹಾ ನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು ರವರು ಗೌರವ ವಂದನೆ ಸ್ವೀಕರಿಸಿದರು.
ಆಲ್ ರೌಂಡ್ ಬೆಸ್ಟ್ ಪ್ರಶಸ್ತಿಯನ್ನು ದೀಪಾ ಎಂ. ಕೆ. ರವರು ಪಡೆದುಕೊಂಡಿರುತ್ತಾರೆ.
ಕನ್ನಡ ಆಜ್ಞೆಗಳ ಮೂಲಕ ಸಂಪೂರ್ಣ ಕವಾಯತು ನಡೆಸಲಾಯಿತು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಎಸ್ಪಿ ಉಮಾಪ್ರಶಾಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು