October 5, 2024

ಕಾಫಿ ಎಸ್ಟೇಟ್ ಒಂದರಲ್ಲಿ ಜಿಂಕೆ ಮರಿ ಸಾಕಿದ ಮಾಲೀಕರ ಮೇಲೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲ್ಲೂಕಿನ ಕೆ. ತಲಗೂರು ಗ್ರಾಮದ ಕಾಫಿ ಎಸ್ಟೇಟ್ ಮಾಲೀಕ ತಿಮೋತಿ ಮಿಸ್ಕಿತ್ ಅವರ ತೋಟದ ಮನೆಯಲ್ಲಿ ಸಾಕಿದ್ದ ಚುಕ್ಕಿ ಜಿಂಕೆ ಮರಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ತಿಮೋತಿ ಮಿಸ್ಕಿತ್ ಅವರ ಮನೆಯಲ್ಲಿ ಜಿಂಕೆಯ ಉಗುರು ಸೇರಿದಂತೆ ಅಲಂಕಾರಿಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.

ನಿರೀಕ್ಷಕಿ ಸುನಿತಾ ಅವರ ನೇತೃತ್ವದ ತಂಡ ಖಚಿತ ಮಾಹಿತಿಯನ್ನಾದರಿಸಿ ದಾಳಿ ನಡೆಸಿ ಜಿಂಕೆ ಮರಿಯನ್ನು ವಶಪಡಿಸಿಕೊಂಡಿದ್ದಾರೆ.

ತೋಟದಲ್ಲಿ ಸಿಕ್ಕಿದ್ದ ಜಿಂಕೆ ಮರಿಯನ್ನು ಸಾಕಲು ಹೋಗಿ ಈಗ ತೋಟದ ಮಾಲೀಕರು ಪೇಚಿಗೆ ಸಿಲುಕಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ