30 ದಿನ ಉಪವಾಸ ವ್ರತಾಚರಣೆ ಮಾಡುವ ಮೂಲಕ ರಂಜಾನ್ ಹಬ್ಬವನ್ನು ಮುಸಲ್ಮಾನ್ ಸಮುದಾಯದವರು ಶನಿವಾರ ವಿಜೃಂಭಣೆಯಿಂದ ಆಚರಿಸಿಕೊಂಡರು. ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರ ಮತ್ತು ಗ್ರಾಮಾಂತರ ಪ್ರದೇಶದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ಈದ್ ಉಲ್ ಪಿತರ್ ಹಬ್ಬವನ್ನು ಅಚರಿಸಿ ಸಂಭ್ರಮಿಸಿದರು.
ಪ್ರತಿ ವರ್ಷ ಮೆರವಣಿಗೆ ನೆಡೆಸಿ ವಿವಿಧ ಕಾರ್ಯಕ್ರಮ ರೂಪಿಸುವ ಮೂಲಕ ಆಸಚರಿಸುತ್ತಿದ್ದ ರಂಜಾನ್ ಹಬ್ಬವನ್ನು ಈ ಬಾರಿ ಚುನಾವಣೆ ಕಾರಣದಿಂದಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಮಸೀದಿಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವ ಮೂಲಕ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.