ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತರಿಕೆರೆ ತಾಲ್ಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.
ಮೃತರನ್ನು ತರಿಕೆರೆ ತಾಲ್ಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ (24) ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಎಂದು ಗುರುತಿಸಲಾಗಿದೆ.
ತರಿಕೆರೆಯಿಂದ ಬೇಲೇನಹಲ್ಲಿ ಗ್ರಾಮಕ್ಕೆ ಹೋಗುವ ದಾರಿಮಧ್ಯೆ ಈ ಅಪಘಾತ ಸಂಭವಿಸಿದೆ.