ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಸಾಯಿ ಕೃಷ್ಣ ಹೆಲ್ತ್ ಸೆಂಟರ್ನಲ್ಲಿ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ ಹಾಗು ಸಮುದಾಯ ದಂತ ವಿಭಾಗ, ಮಂಗಳೂರು ದೇರಳಕಟ್ಟೆಯ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಜುಲೈ 11 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಏರ್ಪಡಿಸಲಾಗಿದೆ ಎಂದು ಬಣಕಲ್ ಕೃಷ್ಣ ಹೆಲ್ತ್ ಸೆಂಟರ್ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಬಿರದಲ್ಲಿ ಉಚಿತ ದಂತ ತಪಾಸಣೆ, 60 ವರ್ಷ ಮೇಲ್ಪಟ್ಟವರಿಗೆ ಉಚಿತ ದಂತ ಪಂಕ್ತಿ ಅಳವಡಿಸುವಿಕೆ, ಇಂಪ್ಲಾಂಟ್ ಆಧಾರಿತ ಚಿಕಿತ್ಸೆಗೆ ಸಲಹೆ ಹಾಗೂ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ, ಚಿಕಿತ್ಸೆಗೆ ಒಳ ಪಡುವ ಹಲ್ಲುಗಳನ್ನು ತುಂಬಿಸುವುದು, ಕೆಟ್ಟಿರುವ ಹಲ್ಲುಗಳ ಕೀಳುವಿಕೆ, ಸೀಳು ತುಟಿ ಹಾಗು ಮುಖಾಂಗದ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿ ಸಲಹೆ ಹಾಗೂ ಯೆನೆಪೊಯ ಆಸ್ಪತ್ರೆಯಲ್ಲಿ ವ್ಯವಸ್ಥೆ ಮತ್ತಿತರ ಸೇವೆಗಳು ಲಭ್ಯ ಇರುತ್ತವೆ.
ಈ ದಂತ ಭಾಗ್ಯ ಯೋಜನೆಯ ಸೇವೆ ಸದುಪಯೋಗಪಡಿಸಿಕೊಳ್ಳುವವರು ಹೆಚ್ಚಿನ ಮಾಹಿತಿಗಾಗಿ 7349383101, 9980349010, 09256200220 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ನಿರಂತರ ಸುದ್ದಿಗಳಿಗೆ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/IkFCXal7O5ODMBHsmKv9ak