October 5, 2024

ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲ್ಲೂಕು ಮಂಚಿ ಗ್ರಾಮದ 25 ವರ್ಷದ ದಾವೂದ್ ಅಮೀರ್, 23 ವರ್ಷದ ಅಬ್ದುಲ್ ರಹೀಜ್, ಬಂಟ್ವಾಳ ತಾಲ್ಲೂಕು ಕವಾಲ ಮಡೂರು ಗ್ರಾಮದ 23 ವರ್ಷದ ಆಫ್ರಿದಿ, 20 ವರ್ಷದ ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.

ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು  ಬಂಧಿಸಲಾಗಿತ್ತು, ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.

ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.

ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು.

ದಕ್ಷಿಣ ಕನ್ನ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು.

ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ