ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಐ.ಎ.ಎಸ್. ಅಧಿಕಾರಿ ಸತ್ಯಭಾಮ ಸಿ. ಅವರು ನೇಮಕವಾಗಿದ್ದಾರೆ.
ಹಾಸನ ಜಿಲ್ಲಾಧಿಕಾರಿಗಳಾಗಿದ್ದ ಅರ್ಚನ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸತ್ಯಭಾಮ ಸಿ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸತ್ಯಭಾಮ ಅವರು ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅತಿಸಣ್ಣ ಮತ್ತು ಸಣ್ಣ ಉದ್ದಿಮೆಗಳ ವಿಭಾಗದ ನಿರ್ದೇಶಕರಾಗಿದ್ದರು.
ರಾಜ್ಯ ಸರ್ಕಾರ ಇಂದು ರಾಜ್ಯದ 9 ಐ.ಎ.ಎಸ್. ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.