ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಸರಳಿ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕಾಫಿನಾಡು ಚಿಕ್ಕಮಗಳೂರರಿನಲ್ಲಿ ಈ ಘಟನೆ ಸಂಭವಿಸಿದೆ ಚಿಕ್ಕಮಗಳೂರು ಸಮೀಪದ ಹಿರೇಗೌಜ ಎಂಬಲ್ಲಿ ಘಟನೆ ನಡೆದಿದ್ದು ಬೈಕಿನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆವರ ಮಗು ಸ್ಥಿತಿ ಗಂಭೀರವಾಗಿದೆ.
ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳು. ಬೈಕಿನಲ್ಲಿದ 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ. ಕಾರು ಚಾಲಕ ಹರೀಶ್ ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ನಿನ್ನೆ ರಾತ್ರಿ ಹಿರೇಗೌಜ ಸಮೀಪ ಚಿಕ್ಕಮಗಳೂರು ಕಡೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರು ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಮೃತ ದಂಪತಿಗಳು ಚಿಕ್ಕಮಗಳೂರಿನಿಂದ ಶಿವಮೊಗ್ಗ ಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು, ಅನೇಕ ಮಂದಿ ಅಪಘಾತದಿಂದ ಅಸುನೀಗಿದ್ದಾರೆ.