ಕೇರಳ ರಾಜ್ಯದ ತಿರುವವಂತಪುರದಲ್ಲಿರುವ ಜಿಮ್ಮಿ ಜಾರ್ಜ್ ಒಳಾಂಗಣ ಕ್ರೀಡಾಂಗಣದಲ್ಲಿ ದಿನಾಂಕ 1.10.2023 ರಿಂದ ದಿನಾಂಕ 2.10.2023ರ ವರೆಗೆ ನಾಲ್ಕನೇ ದಕ್ಷಿಣ ಭಾರತದ ಪೆಂಕಾಕ್ ಸಿಲತ್ ಚಾಂಪಿಯನ್ಶಿಪ್ ನಲ್ಲಿ ಚಿಕ್ಕಮಗಳೂರಿನ ಗಿರೀಶ್ ಬೆಳ್ಳಿ ಪದಕ ಗಳಿಸಿದ್ದಾರೆ.
ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಗಿರೀಶ್ ಗಾಂಡ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಇವರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಘಟಕದ ಸಿಬ್ಬಂದಿಯಾಗಿದ್ದು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾ ಅಭಿವೃದ್ಧಿ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಗಿರೀಶ್ ಅವರು ಈ ಹಿಂದೆಯೂ ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಗಳಿಸಿ ಜಿಲ್ಲೆಗೆ ರಾಜ್ಯಕ್ಕೆ ಪೋಲಿಸ್ ಇಲಾಖೆಗೆ ಗೌರವ ತಂದಿರುತ್ತಾರೆ. ಅಲ್ಲದೇ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತರಬೇತಿಯನ್ನು ನೀಡಿ ಅನೇಕ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡುತ್ತಿದ್ದಾರೆ.